ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಕೊರೊನಾವೈರಸ್ ಸೋಂಕು ನಿಯಂತ್ರಣಸಲಕರಣೆ ಖರೀದಿಯಲ್ಲಿ ಅವ್ಯವಹಾರ ನಡೆದಿಲ್ಲ.ದಾಖಲೆಗಳಿವೆ ಎಂದು ಹೇಳಿದರಷ್ಟೆ ಸಾಲದು. ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್ನಲ್ಲಿಆಗ್ರಹಿಸಿದ್ದಾರೆ.
ಮುಂದುವರಿದು,ಮಾಹಿತಿಇದ್ದರೆ ಮುಚ್ಚಿಡುತ್ತಿರುವುದು ಯಾಕೆ?ಈ ಬಗ್ಗೆ ಮಾಹಿತಿ ಕೇಳಿದ ನನ್ನ ಪ್ರಶ್ನೆಗಳಿಗೆ ಉತ್ತರಿಸುವಂತೆ ಮುಖ್ಯಮಂತ್ರಿ ಅವರಿಗೆ ಹೇಳಿ ಎಂದಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ, ‘ಕೊರೊನಾ ಚಿಕಿತ್ಸೆಯಲ್ಲಿನ ಅವ್ಯವಹಾರದ ಆರೋಪಕ್ಕೆ ಒಬ್ಬ ಸಚಿವರು ಜತೆಯಲ್ಲಿ ಪ್ರವಾಸಕ್ಕೆ ಕರೆದಿದ್ದಾರೆ, ಇನ್ನೊಬ್ಬರು ಆಸ್ಪತ್ರೆಯ ಹೊಣೆ ಹೊರಲು ಹೇಳಿದ್ದಾರೆ. ಇವರಿಬ್ಬರಿಗೂ ಒಂದೇ ಉತ್ತರ: ದಯವಿಟ್ಟು ರಾಜೀನಾಮೆ ನೀಡಿ, ನಾವು ಪ್ರವಾಸನೂ ಮಾಡ್ತೇವೆ, ಒಂದು ಆಸ್ಪತ್ರೆಯದ್ದಲ್ಲ, ಇಡೀ ರಾಜ್ಯದ ಹೊಣೆಯನ್ನೂ ಹೊರುತ್ತೇವೆ’ ಎಂದು ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.