ADVERTISEMENT

ವೃದ್ಧಾಪ್ಯ, ವಿಧವಾ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ನವೆಂಬರ್ 2020, 15:20 IST
Last Updated 25 ನವೆಂಬರ್ 2020, 15:20 IST
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ   

ಬೆಂಗಳೂರು: ವೃದ್ಧಾಪ್ಯ ವೇತನ, ವಿಧವಾ ವೇತನ ನೀಡಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಬುಧವಾರ ಟ್ವೀಟ್‌ ಮಾಡಿರುವ ಅವರು, 'ರಾಜ್ಯ ಸರ್ಕಾರ ದಿವಾಳಿಯಾಗಿದೆ. ವೃದ್ಧಾಪ್ಯ ವೇತನ, ವಿಧವಾ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಇಂತಹ ಆರ್ಥಿಕ ಸಂಕಷ್ಟದ ನಡುವೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರ್ಕಾರ ಇನ್ನಷ್ಟು ದುಂದುವೆಚ್ಚಕ್ಕೆ ಎಡೆಮಾಡಿಕೊಟ್ಟಿದೆ. ಇದು ಯಡಿಯೂರಪ್ಪ ಅವರಿಂದ ಅಧಿಕಾರ ಉಳಿಸಿಕೊಳ್ಳುವ ಸರ್ಕಸ್ಸಲ್ಲದೆ ಬೇರೇನಲ್ಲ' ಎಂದು ಹರಿಹಾಯ್ದಿದ್ದಾರೆ.

'ಕೊರೊನಾದಿಂದ ಜನರು ಬದುಕು ಸಾಗಿಸುವುದೇ ಕಷ್ಟವೆನ್ನುವ ಪರಿಸ್ಥಿತಿ ಇದೆ. ಅವರು ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‌ಲೈನ್ ಶಿಕ್ಷಣವನ್ನು ಕೈಬಿಡಲು ಹೊರಟಿರುವುದು ಅಮಾನವೀಯ. ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ. ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಯನ್ನು ಬಗೆಹರಿಸಬೇಕು' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.