ADVERTISEMENT

ಶಾಸಕ ಜಮೀರ್ ಅಹಮ್ಮದ್ ಮನೆ ಮೇಲೆ ಇ.ಡಿ ದಾಳಿ: ರಾಜಕೀಯ ಪ್ರೇರಿತ ಎಂದ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2021, 7:44 IST
Last Updated 5 ಆಗಸ್ಟ್ 2021, 7:44 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ಬೆಂಗಳೂರು: ‘ಶಾಸಕ ಜಮೀರ್ ಅಹಮ್ಮದ್ ಅವರ ಮನೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

‘ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ವಿರೋಧ ಪಕ್ಷಗಳನ್ನು ಹೆದರಿಸುವ ಕೆಲಸ ಮಾಡುತ್ತಿದೆ’ ಎಂದು ಅವರು ತಿಳಿಸಿದ್ದಾರೆ.

‘ಐಟಿ, ಇಡಿ ಬಳಸಿಕೊಂಡು ಕಿರುಕುಳ ನೀಡುವ ಬಿಜೆಪಿಯ ವರ್ತನೆ ಖಂಡನೀಯ’ ಎಂದೂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.