ADVERTISEMENT

ಯಡಿಯೂರಪ್ಪಗೆ ಅಧಿಕಾರದ ಹುಚ್ಚು ಹಿಡಿದಿದೆ: ಸಿದ್ದರಾಮಯ್ಯ 

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2019, 9:25 IST
Last Updated 10 ಫೆಬ್ರುವರಿ 2019, 9:25 IST
ಸಿದ್ದರಾಮಯ್ಯ ಹಾಗೂ ಬಿ.ಎಸ್‌.ಯಡಿಯೂರಪ್ಪ
ಸಿದ್ದರಾಮಯ್ಯ ಹಾಗೂ ಬಿ.ಎಸ್‌.ಯಡಿಯೂರಪ್ಪ   

ಚಿತ್ರದುರ್ಗ:ಆಪರೇಷನ್‌ ಕಮಲದಆಡಿಯೊ ಬ‌ಗ್ಗೆಬಿ.ಎಸ್‌.ಯಡಿಯೂರಪ್ಪ ತಪ್ಪೊಪ್ಪಿಕೊಂಡಿರುವ ಹಿನ್ನಲೆ ‘ಅವರಿಗೆ ಅಧಿಕಾರದ ಹುಚ್ಚು ಹಿಡಿದಿದೆ’ ಎಂದು ಸಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಸಂವಿಧಾನಬದ್ಧವಾಗಿ ಸರ್ಕಾರವನ್ನು ರಚಿಸಲಾಗಿದೆ. ಆದರೆ ಬಿಜೆಪಿ ಅವರು ಮೈತ್ರಿ ಸರ್ಕಾರವನ್ನು ಕಿತ್ತೆಸೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

‘ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಹೇಳಿದ್ದರು. ಈಗ ಅವರೇಸತ್ಯ ಒಪ್ಪಿಕೊಂಡಿದ್ದಾರೆ ಹಾಗಾಗಿ ಕೂಡಲೇರಾಜೀನಾಮೆ ನೀಡಲಿ’ ಎಂದು ಆಗ್ರಹಿಸಿದರು.

ADVERTISEMENT

ಪ್ರತಿಕ್ರಿಯೆ ನೀಡಲ್ಲ: ಎಚ್‌.ಡಿ.ದೇವೇಗೌಡ
‘ಆಡಿಯೊ ವಿಚಾರ ನನಗೆ ಸಂಬಂಧಿಸಿದಲ್ಲ ಹಾಗಾಗಿ ನಾನು ಪ್ರತಿಕ್ರಿಯಿಸುವುದಿಲ್ಲ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.