ADVERTISEMENT

ರಬ್ಬರ್‌ ಸ್ಟಾಂಪ್‌ ಸಿ.ಎಂ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2021, 19:31 IST
Last Updated 30 ಜುಲೈ 2021, 19:31 IST
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ   

ಹುಬ್ಬಳ್ಳಿ: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಬ್ಬರ್ ಸ್ಟಾಂಪ್‌ ಮುಖ್ಯಮಂತ್ರಿಯಾಗಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಶುಕ್ರವಾರ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿರೋಧ ಪಕ್ಷಗಳು ಆರೋಪಿಸದಿದ್ದರೂ ಬೊಮ್ಮಾಯಿ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇದು, ಅವರ ಮನಸ್ಥಿತಿಯನ್ನು ತೋರಿಸುತ್ತದೆ’ ಎಂದರು. ರಾಜ್ಯದಲ್ಲಿ ಪ್ರವಾಹದಿಂದ ಸಂಕಷ್ಟ ಎದುರಿಸುತ್ತಿರುವ ಜನರ ಸಮಸ್ಯೆ ಆಲಿಸಬೇಕಿದ್ದ ಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕರು, ಸಚಿವರಾಗುವುದಕ್ಕಾಗಿ ದೆಹಲಿ ಯಾತ್ರೆ ನಡೆಸಿದ್ದಾರೆ ಎಂದೂ ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT