ADVERTISEMENT

ರಾಯಣ್ಣ ಪ್ರತಿಮೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿ: ಸಿದ್ದರಾಮಯ್ಯ ಟ್ವೀಟ್

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2020, 15:17 IST
Last Updated 16 ಆಗಸ್ಟ್ 2020, 15:17 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಳಗಾವಿ: ‘ತಾಲ್ಲೂಕಿನ ಪೀರನವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಪೊಲೀಸರಿಗೆ ತಿಳಿಸಿದ್ದೇನೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಭಾನುವಾರ ಟ್ವೀಟ್ ಮಾಡಿದ್ದಾರೆ.

‘ಕಾನೂನು ಪ್ರಕಾರ ಅನುಮತಿ ಪಡೆದುಕೊಂಡು, ರಾಯಣ್ಣನ ಅಭಿಮಾನಿಗಳು ಪ್ರತಿಮೆ ಸ್ಥಾಪನೆಗೆ ಮುಂದಾಗಬೇಕು. ಇಂತಹ ಸಂದರ್ಭದಲ್ಲಿ ಪೊಲೀಸರು ಸಂಯಮದಿಂದ ವರ್ತಿಸಬೇಕು’ ಎಂದು ಹೇಳಿದ್ದಾರೆ.

ರಾಯಣ್ಣನ ಜಯಂತಿಯ ದಿನವಾದ ಶನಿವಾರ ಅಭಿಮಾನಿಗಳು ಅವರ ಪ್ರತಿಮೆ ಪ್ರತಿಷ್ಠಾಪನೆಗೆ ನಸುಕಿನಲ್ಲಿ ಮುಂದಾಗಿದ್ದರು. ತಡೆದಪೊಲೀಸರು ಪ್ರತಿಮೆ ವಶಕ್ಕೆ ಪಡೆದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.