ADVERTISEMENT

ಕೋವಿಡ್‌ ಸಾವಿನ ಮರು ಎಣಿಕೆಯಿಂದ ನ್ಯಾಯ ಸಾಧ್ಯ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 7 ಮೇ 2022, 19:14 IST
Last Updated 7 ಮೇ 2022, 19:14 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ‘ಕೋವಿಡ್‌ನಿಂದ ಸತ್ತವರಿಗೆ ಪರಿಹಾರ ಕೊಡುವುದನ್ನು ತಪ್ಪಿಸಲು ಕೇಂದ್ರ ಬಿಜೆಪಿ ಸರ್ಕಾರ ಸಾವಿನ ಸುಳ್ಳು ಲೆಕ್ಕ ಹೇಳಿ ಮೋಸ ಮಾಡಿದೆ. ಹೀಗಾಗಿ ಲಕ್ಷಾಂತರ ಕುಟುಂಬಗಳಿಗೆ ಪರಿಹಾರ ಸಿಕ್ಕಿಲ್ಲ. ಸಾವಿನ ಮರುಎಣಿಕೆಯಿಂದ ಮಾತ್ರ ನ್ಯಾಯ ಸಿಗಲು ಸಾಧ್ಯ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸರಣಿ ಟ್ವೀಟ್‌ ಮಾಡಿರುವ ಅವರು, ‘ಕೇಂದ್ರ ಸರ್ಕಾರದ ಪ್ರಕಾರ ಕೋವಿಡ್‌ನಿಂದ ಸತ್ತವರ ಸಂಖ್ಯೆ 4.81 ಲಕ್ಷ. ಡಬ್ಲ್ಯುಎಚ್ಒ ಪ್ರಕಾರ 47.40 ಲಕ್ಷ. ಕೇಂದ್ರದ ಸುಳ್ಳುಗಳ ಸರಮಾಲೆಯನ್ನು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಬಯಲುಗೊಳಿಸಿದೆ’ ಎಂದಿದ್ದಾರೆ.

‘ರಾಜ್ಯದಲ್ಲಿ ಕೋವಿಡ್‌ನಿಂದ ಸತ್ತವರು ಕೇವಲ 37,603 ಎಂದು ರಾಜ್ಯ ಸರ್ಕಾರ ಹೇಳಿತ್ತು. ಕೆಪಿಸಿಸಿ ಸಮೀಕ್ಷೆ ಪ್ರಕಾರ 3.17 ಲಕ್ಷ. ಅರವಿಂದ್ ಸುಬ್ರಹ್ಮಣ್ಯ ಮತ್ತು ಜೇಕಬ್ ಝಾ ಪ್ರಕಾರ ಸಾವಿನ ಸಂಖ್ಯೆ 4 ಲಕ್ಷ. ಕಳೆದ ಜೂನ್‌ನಲ್ಲಿಯೇ ಈ ವಿಷಯ ಹೇಳಿದ್ದೆ. ರಾಜ್ಯದಲ್ಲಿ ಈವರೆಗೆ 5 ಲಕ್ಷಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿರುವ ಸಾಧ್ಯತೆ ಇದೆ. ಮರು ಸಮೀಕ್ಷೆ ಮೂಲಕ ಖಚಿತಪಡಿಸಿಕೊಂಡು ಮೃತರ ಕುಟುಂಬಕ್ಕೆ ಕನಿಷ್ಠ ₹4 ಲಕ್ಷ ಪರಿಹಾರ ಕೊಡಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.