ಬೆಂಗಳೂರು: ಮಂಡ್ಯದ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಶನಿವಾರ ಈ ಕುರಿತು ಬಿಜೆಪಿ ಕರ್ನಾಟಕ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು ಅಸಮಾಧಾನ ಹೊರ ಹಾಕಿದೆ.
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯ ಪರಂಪರೆ, ಕನ್ನಡದ ಮಹತ್ವ, ಕನ್ನಡದ ಬೆಳವಣಿಗೆ, ಕನ್ನಡದ ಆಸ್ಮಿತೆಯ ಕುರಿತು ಚರ್ಚೆ ಆಗಬೇಕಾಗಿತ್ತು. ಆದರೆ, ಭ್ರಷ್ಟ ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ವೇದಿಕೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದೆ.
ಕರ್ನಾಟಕಕ್ಕಿಂತ ಕೇರಳದ ಮೇಲೆ ಪ್ರೀತಿ ಮಮಕಾರ ತೋರುವ ಸಿದ್ದರಾಮಯ್ಯನವರು, ಸಾಹಿತ್ಯ ಸಮ್ಮೇಳನದ ವೇದಿಕೆಗೆ ಕನ್ನ ಹಾಕಿ ದ್ರೋಹ ಮಾಡಿದ್ದಾರೆ. IPC 420 A1 ಭ್ರಷ್ಟ ಮುಖ್ಯಮಂತ್ರಿಗಳೇ, ಮಂಡ್ಯದ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯನ್ನು ದುರುಪಯೋಗ ಪಡಿಸಿಕೊಂಡು ಕನ್ನಡಕ್ಕೆ ಅವಮಾನ ಮಾಡಿದ್ದಿರಿ ಎಂದು ತಿವಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.