ADVERTISEMENT

ಯಾವಾಗ ಬೇಕಾದರೂ ಮಧ್ಯಂತರ ಚುನಾವಣೆ ಬರಬಹುದು: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2019, 8:58 IST
Last Updated 28 ಆಗಸ್ಟ್ 2019, 8:58 IST
   

ಬೆಳಗಾವಿ:ರಾಜ್ಯ ಬಿಜೆಪಿ ಸರ್ಕಾರ ಆಪರೇಷನ್ ಕಮಲ’ದ ಅನೈತಿಕ ಶಿಶುವಾಗಿದ್ದುಈ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಹಣ, ಆಮಿಷ, ಒತ್ತಡ ತಂತ್ರದಿಂದ ಶಾಸಕರನ್ನು ಖರೀದಿಸಿ, ವಾಮಮಾರ್ಗದ ಮೂಲಕ ಬಿಜೆಪಿ ಅಧಿಕಾರ ಹಿಡಿದಿದೆ. ಈ ಸರ್ಕಾರಕ್ಕೆ ಸ್ಪಷ್ಟ ಜನಾದೇಶ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ADVERTISEMENT

‘ನಾವೀಗ ಅಧಿಕೃತವಾಗಿ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ನಮ್ಮ ವಿರೋಧ ಕೋಮುವಾದಿ ಬಿಜೆಪಿಯೇ ಹೊರತು ಜೆಡಿಎಸ್ ವಿರುದ್ಧ ಅಲ್ಲ ಎಂದರು.

ನಾವ್ಯಾರೂ ಜೆಡಿಎಸ್‌ನವರ ಮೇಲೆ ಹಗೆ ಸಾಧಿಸುತ್ತಿಲ್ಲ. ನಮಗೆ ಕೋಮುವಾದಿ ಶಕ್ತಿ ವಿರೋಧಿಯೇ ಹೊರತು, ಇನ್ನೊಂದು ಜಾತ್ಯತೀತ ಶಕ್ತಿಯಲ್ಲ’ ಎಂದು ಸಿದ್ಧರಾಮಯ್ಯ ಹೇಳಿದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.