ADVERTISEMENT

ಸಿದ್ದರಾಮಯ್ಯ ಹೇಳಿಕೆಗೆ ಬಿ.ಸಿ.ಪಾಟೀಲ ತಿರುಗೇಟು

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2020, 11:33 IST
Last Updated 7 ಮಾರ್ಚ್ 2020, 11:33 IST

ಹಾವೇರಿ: ಸಿದ್ದರಾಮಯ್ಯ ಮಾಜಿ ಸಿಎಂ ಆಗಿದ್ದವರು. ಗೌರವಾನ್ವಿತವಾಗಿ ಮಾತನಾಡೋದು ಕಲಿಯಬೇಕು. ನಮ್ಮ ನಾಲಿಗೆ ನಮ್ಮ ಸಂಸ್ಕೃತಿ ತೋರಿಸುತ್ತದೆ. ಅವರು ಗೌರವಯುತವಾಗಿ ಮಾತನಾಡಬೇಕು‌ ಎಂದು ಕೃಷಿ ಸಚಿವ ಬಿ‌.ಸಿ. ಪಾಟೀಲ ಹೇಳಿದರು.

ಹಿರೇಕೆರೂರಲ್ಲಿ ಶನಿವಾರ ಮಾತನಾಡಿದ ಅವರು, ಬಿಜೆಪಿ ಸರ್ಕಾರ ದರಿದ್ರ ಸರ್ಕಾರ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.

ಮೋದಿ ಆಡಳಿತದಲ್ಲಿ ಆರ್ ಬಿಐ ದಿವಾಳಿ ಆಗಿದೆ ಎಂಬ ದೇವೇಗೌಡರ ಹೇಳಿಕೆ ಸರಿಯಲ್ಲ. ಕರೋನಾ ವೈರಸ್ ಭೀತಿಯಿಂದ ಜಗತ್ತಿನ ಅರ್ಥ ವ್ಯವಸ್ಥೆ ಕುಸಿದಿದೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.