ಬೆಂಗಳೂರು: ‘ಪತ್ರಿಕೆಗಳಿಗೆ ಒಂದು ವರ್ಷದಿಂದ ಬಾಕಿ ಇರುವ ಜಾಹೀರಾತು ಹಣ ಬಿಡುಗಡೆ ಮಾಡಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.
ಲಾಕ್ ಡೌನ್ನಿಂದ ಮಾಧ್ಯಮ ಕ್ಷೇತ್ರ ಕೂಡಾ ತೊಂದರೆಗೆ ಸಿಲುಕಿದೆ. ಅದರಲ್ಲೂ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳು ಸಂಕಷ್ಟದಲ್ಲಿವೆ. ಜಾಹೀರಾತು ಹಣ ಬಿಡುಗಡೆ ಮಾಡಿದರೆ ಅನುಕೂಲವಾಗುತ್ತದೆ. ಅಲ್ಲದೆ, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ವಿಶೇಷ ಸಂದರ್ಭವೆಂದು ಪರಿಗಣಿಸಿ ಜಾಹೀರಾತು ನೀಡಬೇಕು‘ ಎಂದೂ ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.