ADVERTISEMENT

ಸರಳವಾಗಿ ದಸರಾ ಆಚರಣೆ?

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2019, 20:03 IST
Last Updated 4 ಆಗಸ್ಟ್ 2019, 20:03 IST
   

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಆಚರಣೆಗೆ ಸಂಬಂಧಿಸಿದ ಪೂರ್ವ ಸಿದ್ಧತೆಗಳಿಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಆ. 9ರಂದು ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.

ರಾಜ್ಯವನ್ನು ಬರ ತೀವ್ರವಾಗಿ ಕಾಡುತ್ತಿದ್ದು, ಮತ್ತೊಂದೆಡೆ ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಹಾವಳಿ ಉಂಟಾಗಿದೆ. ರೈತರು ಸತತವಾಗಿ ಬರದಿಂದ ನಲುಗಿದ್ದು, ಸಂಕಷ್ಟದಲ್ಲಿ ಇರುವ ಈ ಸಮಯದಲ್ಲಿ ದಸರಾವನ್ನು ಸರಳವಾಗಿ ಆಚರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಸರಳ, ಅದ್ದೂರಿ ಎನ್ನುವ ಬದಲು ಸಾಂಪ್ರದಾಯಿಕ ಆಚರಣೆ ಬಗ್ಗೆಯೂ ಚರ್ಚಿಸಿ, ನಿರ್ಧರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT