ಬೆಂಗಳೂರು: ಹಾನಗಲ್ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿ ಪಟ್ಟಿಗೆ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೆಸರನ್ನು ಸೇರಿಸಿ ಬಿಜೆಪಿ ಪರಿಷ್ಕೃತ ಆದೇಶವನ್ನು ಹೊರಡಿಸಿದೆ.
ವಿಜಯೇಂದ್ರ ಅವರನ್ನು ಉಸ್ತುವಾರಿ ಪಟ್ಟಿಯಲ್ಲಿ ಸೇರಿಸದ ಕಾರಣ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅಭಿಮಾನಿಗಳು ಮತ್ತು ಬೆಂಬಲಿಗರು ಹರಿಹಾಯ್ದಿದ್ದರು. ವಿಜಯೇಂದ್ರ ಈ ಸಂಬಂಧ ಹೇಳಿಕೆ ನೀಡಿ ಟೀಕೆಗಳನ್ನು ಖಂಡಿಸಿದ್ದರು. ಅದರ ಬೆನ್ನಲ್ಲೇ ಪರಿಷ್ಕೃತ ಆದೇಶ ಹೊರ ಬಿದ್ದಿದೆ.
ಓದಿ:ಬಿಜೆಪಿ ನಾಯಕರ ವಿರುದ್ಧ ಅಭಿಮಾನಿಗಳ ಟೀಕೆಗೆ ಬಿ.ವೈ.ವಿಜಯೇಂದ್ರ ಖಂಡನೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.