ಬೆಂಗಳೂರು:‘ತಮ್ಮ ಪಕ್ಷದಲ್ಲಿದ್ದವರು ಕಾಂಗ್ರೆಸ್ಗೆ ಹೋಗಿದ್ದಾರಲ್ಲ ಎಂಬ ನೋವು ಕುಮಾರಣ್ಣ ಅವರಿಗಿದೆ. ಆ ನೋವಿನಿಂದ ಮಾತನಾಡಿದ್ದಾರೆ’ ಎಂದುಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಕುಮಾರಸ್ವಾಮಿ ಮಾಡಿರುವ ಟ್ವೀಟ್ಗೆ ಪ್ರತಿಕ್ರಿಯಿಸಿದ ಅವರು, ’ರಾಜಕಾರಣ ನಿಂತ ನೀರಲ್ಲ ಎಂದು ಕುಮಾರಣ್ಣ ಅವರೇ ಹೇಳಿದ್ದಾರೆ. ಕೆಲವರು ಬಿಜೆಪಿಗೆ ಹೋಗಲು ಸಿದ್ಧರಿರುತ್ತಾರೆ. 17 ಜನ ಸಂಸದರು ಗೆದ್ದು, ದೇವೇಗೌಡರು ದೇಶದ ಪ್ರಧಾನಿ ಆದಾಗ, ನಾವು ಅವರನ್ನು ಹೈಜಾಕ್ ಮಾಡಿ ಕರೆದುಕೊಂಡು ಬಂದಿದ್ದೆವಾ? ಒಂದಲ್ಲ ಒಂದು ಕಾರಣದಿಂದ ಬರುವವರು ಬರುತ್ತಾರೆ. ಈ ಹಿಂದೆ ಅನೇಕ ನಾಯಕರು ಕೂಡ ಅವರ ಜತೆ ರಾಜಕೀಯ ಭಿನ್ನಾಭಿಪ್ರಾಯದಿಂದ ಕಾಂಗ್ರೆಸ್ಗೆ ಬಂದಿದ್ದರು’ ಎಂದರು.
‘ಎಂ.ಸಿ. ಮನಗೂಳಿ ಅವರು ನಮ್ಮನ್ನು ಬಂದು ಭೇಟಿ ಮಾಡಿದ್ದು ನಿಜ. ಈ ವಿಚಾರದಲ್ಲಿ ಸುಳ್ಳು ಹೇಳುವ ಅಗತ್ಯ ನನಗಿಲ್ಲ. ಬೇರೆ ಪಕ್ಷಗಳ ಅಭ್ಯರ್ಥಿಯನ್ನು ಹೈಜಾಕ್ ಮಾಡುವ ಸ್ಥಿತಿ ಕಾಂಗ್ರೆಸ್ಗೆ ಬಂದಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಬೇಡ ಎನ್ನುವುದಿಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.