ಬೆಂಗಳೂರು: ವಿವಿಧ ಶ್ರೇಣಿಯ ಆರು ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಶನಿವಾರ ಆದೇಶ ಹೊರಡಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಎಸ್. ರಂಗಪ್ಪ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕಾರ್ಯದರ್ಶಿ ಹುದ್ದೆಗೆ ನೇಮಿಸಲಾಗಿದೆ.
ಇತರ ವರ್ಗಾವಣೆ: ಡಾ.ವಾಸಂತಿ ಅಮರ್ ಬಿ.ವಿ.– ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ; ಶ್ರೀರೂಪ– ನಿಯಂತ್ರಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ; ಪಾತರಾಜು ವಿ.– ಮುಖ್ಯ ಆಡಳಿತಾಧಿಕಾರಿ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ; ಶೀಲವಂತ ಎಂ. ಶಿವಕುಮಾರ್– ಆಯುಕ್ತರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಡಾ.ಡಿ.ಬಿ. ನಟೇಶ್– ಜಂಟಿ ನಿರ್ದೇಶಕರು (ಆಡಳಿತ), ಆಯುಕ್ತರ ಕಚೇರಿ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.