ಬೆಂಗಳೂರು: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಒಕ್ಕೂಟ, ಪೀಣ್ಯ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳು ಮತ್ತು ವಿವಿಧ ಕೈಗಾರಿಕಾ ಸಂಘಟನೆಗಳ ಪ್ರಮುಖರು ಶುಕ್ರವಾರ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಲಾಕ್ಡೌನ್ ಪರಿಸ್ಥಿತಿಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ, ಕೈಗಾರಿಕೋದ್ಯಮಿಗಳ ನೆರವಿಗೆ ಸ್ಪಂದಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಮನವಿ ಮಾಡಿದರು.ಕೈಗಾರಿಕ ಸಂಘಟನೆಗಳ ಪ್ರಮುಖರಾದ ಆರ್ ರಾಜು, ಹನುಮಂತೇಗೌಡ, ರಾಜಗೋಪಾಲ್, ಬೋರೇಗೌಡ, ಕೆ.ಎನ್. ನರಸಿಂಹಮೂರ್ತಿ, ಶ್ರೀನಿವಾಸ್, ಮಲ್ಲೇಶಗೌಡ ಸೇರಿದಂತೆ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.