ಮಡಿಕೇರಿ: ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಾಯಾದೇವಿ ಗಲಗಲಿ ಹಾಗೂ ಪ್ರಥಮದರ್ಜೆ ಸಹಾಯಕ ಕೆ.ಬಿ.ಮೋಹನ್ ಇಲ್ಲಿ ಗುರುವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ.
ತಾಲ್ಲೂಕಿನ ಮೇಕೇರಿಯ ಶಕ್ತಿನಗರದ ನಿವಾಸಿ ನಳಿನಿ ಅವರಿಂದ ₹ 20 ಸಾವಿರ ಲಂಚ ಪಡೆಯುತ್ತಿದ್ದಾಗ ಎಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದರು. ದೌರ್ಜನ್ಯ ಪ್ರಕರಣದಲ್ಲಿ ನಳಿನಿ ಕುಟುಂಬಕ್ಕೆ ಸರ್ಕಾರದಿಂದ ₹ 4 ಲಕ್ಷ ಪರಿಹಾರ ಮಂಜೂರಾಗಿತ್ತು. ಅದರ ಚೆಕ್ ನೀಡಲು ಲಂಚ ಕೇಳಿದ್ದರು. ನಳಿನಿ ಅವರು ಮೊಬೈಲ್ ರೆಕಾರ್ಡ್ ಸಹಿತ ಎಸಿಬಿ ಪೊಲೀಸರಿಗೆ ದೂರು ಸಲ್ಲಿಸಿದ್ದರು.
ಡಿವೈಎಸ್ಪಿ ಪೂರ್ಣಚಂದ್ರ ತೇಜಸ್ವಿ, ಇನ್ಸ್ಪೆಕ್ಟರ್ ಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.