ADVERTISEMENT

ಚುನಾವಣಾ ಕರ್ತವ್ಯದಲ್ಲಿದ್ದ ಯೋಧ ಸಾವು

​ಪ್ರಜಾವಾಣಿ ವಾರ್ತೆ
Published 4 ಮೇ 2019, 19:48 IST
Last Updated 4 ಮೇ 2019, 19:48 IST
ಆರ್.ಕೆ.ಪ್ರಕಾಶ್
ಆರ್.ಕೆ.ಪ್ರಕಾಶ್   

ಪಿರಿಯಾಪಟ್ಟಣ: ಲೋಕಸಭಾ ಚುನಾವಣಾ ಕರ್ತವ್ಯ ನಿರ್ವಹಿಸಲು ಉತ್ತರಪ್ರದೇಶದ ರಾಯ್‌ಬರೇಲಿಗೆ ತೆರಳಿದ್ದ, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಯೋಧ ತಾಲ್ಲೂಕಿನ ಆರ್‌.ಕೆ. ಪ್ರಕಾಶ್‌ (52) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದು ಅವರು ಹುಣಸೂರಿನಲ್ಲಿ ನೆಲೆಸಿದ್ದಾರೆ.

ರಾಮನಾಥತುಂಗ ಗ್ರಾಮದವರಾದ ಪ್ರಕಾಶ್‌, ಮೈಸೂರಿನ ಆರ್‌ಬಿಐನಲ್ಲಿ ಸಿಐಎಸ್ಎಫ್ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪಾರ್ಥಿವ ಶರೀರವನ್ನು ಭಾನುವಾರ ಬೆಳಿಗ್ಗೆ 10 ಗಂಟೆಗೆ ರಾಮನಾಥತುಂಗ ಗ್ರಾಮಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮೃತರ ಸಂಬಂಧಿಕರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.