ADVERTISEMENT

ರಾಜ್ಯದ ವಿವಿಧೆಡೆ ಗುರುವಾರ ಸಂಜೆ ಗುಡುಗು-ಸಿಡಿಲು ಸಹಿತ ಮಳೆ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2021, 13:31 IST
Last Updated 29 ಏಪ್ರಿಲ್ 2021, 13:31 IST
ಬಳ್ಳಾರಿ ಜಿಲ್ಲೆಯಲ್ಲಿ ಗುರುವಾರ ಸಂಜೆ ಆಲಿಕಲ್ಲು ಮಳೆ
ಬಳ್ಳಾರಿ ಜಿಲ್ಲೆಯಲ್ಲಿ ಗುರುವಾರ ಸಂಜೆ ಆಲಿಕಲ್ಲು ಮಳೆ   

ಬೆಂಗಳೂರು: ಗುರುವಾರ ಸಂಜೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಗುರುವಾರ ಸಂಜೆ ಆಲಿಕಲ್ಲು ಮಳೆಯಾಗಿದೆ. ಜಿಲ್ಲೆಯ ಸಿರುಗುಪ್ಪ ನಗರದಲ್ಲಿ ಸಂಜೆ ಆಲಿಕಲ್ಲು ಗಾಳಿ ಸಮೇತ 15 ನಿಮಿಷಗಳ ಕಾಲ ಮಳೆ ಸುರಿಯಿತು. ಕೂಡ್ಲಿಗಿ ಮತ್ತು ಸಂಡೂರಿನಲ್ಲೂ ಮಳೆಯಾಯಿತು.

ಹುಬ್ಬಳ್ಳಿಯಲ್ಲಿ ಕೂಡ ಸಂಜೆಯಾಗುತ್ತಿದ್ದಂತೆ ಜೋರು ಮಳೆ ಆರಂಭವಾಗಿದೆ.

ADVERTISEMENT

ಸಂಡೂರು ತಾಲ್ಲೂಕಿನ ಡಿ. ಮಲ್ಲಾಪುರ ಗ್ರಾಮದ ಜಮೀನಿನಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟಿದೆ.

ಬೆಳಗಾವಿ ನಗರವೂ ಸೇರಿದಂತೆ ತಾಲ್ಲೂಕಿನವಿವಿಧೆಡೆ ಮತ್ತು ಹುಕ್ಕೇರಿ,ಗೋಕಾಕ, ಚಿಕ್ಕೋಡಿ,ಎಂ.ಕೆ.ಹುಬ್ಬಳ್ಳಿಭಾಗದಲ್ಲಿಗುಡುಗುಸಹಿತಮಳೆಯಾಗುತ್ತಿದೆ.

ಉಳಿದಂತೆ ಚಿಕ್ಕಮಗಳೂರು, ಕಲಬರ್ಗಿಯಲ್ಲೂ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.