ADVERTISEMENT

ಸೌಂದರ್ಯ ಜಗದೀಶ್‌ ಪ್ರಕರಣ: ಮಹಿಳೆ ಮೇಲೆ ಹಲ್ಲೆ- ಭದ್ರತಾ ಸಿಬ್ಬಂದಿ ವಶ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2021, 16:32 IST
Last Updated 27 ಅಕ್ಟೋಬರ್ 2021, 16:32 IST

ಬೆಂಗಳೂರು: ಎದುರು ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಹಾಗೂ ತಾಯಿಯ ಮೇಲೆ ಹಲ್ಲೆ ಮಾಡಿದ್ದ ಪ್ರಕರಣದ ಸಂಬಂಧ ನಿರ್ಮಾಪಕ ಸೌಂದರ್ಯ ಜಗದೀಶ್‌ ಅವರ ಮನೆಯ ಭದ್ರತಾ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಭದ್ರತಾ ಸಿಬ್ಬಂದಿ ಬಾಲಾಜಿ ಕಾತಿ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳಾದ ರೇಖಾ ಜಗದೀಶ್‌, ಅವರ ಮಗ ಸ್ನೇಹಿತ್, ಚಾಲಕ ರಕ್ಷಿತ್, ಭುವನಾ, ಲತಾ ಹಾಗೂ ಬೌನ್ಸರ್‌ಗಳಾದ ನಿಖಿಲ್, ಕುಮಾರ್, ರೋಹಿತ್, ಅಶೋಕ ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಅವರ ಕುಟುಂಬದವರಿಂದ ಹೇಳಿಕೆ ಪಡೆಯಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT