ಬೆಂಗಳೂರು: ವಿಶೇಷ ರೈಲುಗಳ ಜೊತೆಗೆ ಏಳು ಹೆಚ್ಚುವರಿ ರೈಲುಗಳು ನಾಳೆ ಬೆಂಗಳೂರಿನಿಂದ ಸಂಚಾರ ಆರಂಭಿಸಲಿವೆ ಎಂದು ನೈರುತ್ಯ ರೈಲ್ವೆ ವಲಯ ತಿಳಿಸಿದೆ.
‘ಬೆಂಗಳೂರು ವಿಭಾಗದಿಂದ 7 ರೈಲುಗಳು ಸೆಪ್ಟೆಂಬರ್ 12, 2020ರಿಂದ ಸಂಚಾರ ಆರಂಭಿಸಲಿವೆ. ಈ ಸೇವೆಯು ಸದ್ಯ ಸಂಚರಿಸುತ್ತಿರುವ ವಿಶೇಷ ರೈಲುಗಳ ಪಟ್ಟಿಗೆ ಹೆಚ್ಚುವರಿ ಸೇರ್ಪಡೆಯಾಗಲಿದೆ’ ಎಂದು ಪ್ರಕಟಣೆಯಲ್ಲಿ ಹೇಳಿದೆ.
ಸದ್ಯ ಹಿರಿಯ ನಾಗರೀಕರು, ವಿದ್ಯಾರ್ಥಿಗಳು, ವಿಕಲಚೇತನರು ಮತ್ತು ಮಕ್ಕಳನ್ನು ನಿಲ್ದಾಣಗಳಿಗೆ ಬಿಡಲು ಹಾಗೂ ಕರೆದುಕೊಂಡು ಹೋಗಲು ಜನರು ಆಗಮಿಸುತ್ತಿದ್ದಾರೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ನಿಲ್ದಾಣ, ಯಶವಂತಪುರ ಹಾಗೂ ಇತರಕಂಟೋನ್ಮೆಂಟ್ ರೈಲ್ವೆ ನಿಲ್ದಾಣಗಳಲ್ಲಿಕೂಡಲೇಪ್ಲಾಟ್ಫಾರ್ಮ್ ಟಿಕೆಟ್ಗಳನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದೆ.
ಜೊತೆಗೆ, ಕೋವಿಡ್–19 ಪರಿಸ್ಥಿತಿ ಇರುವುದರಿಂದಾಗಿ ಜನದಟ್ಟಣೆ ನಿಯಂತ್ರಿಸಲು ಪ್ಲಾಟ್ಫಾರ್ಮ್ ಟಿಕೆಟ್ ದರವನ್ನು ₹ 10 ರಿಂದ ₹ 50ಕ್ಕೆ ಹೆಚ್ಚಿಸಲಾಗಿದೆ ಎಂದೂ ಉಲ್ಲೇಖಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.