ADVERTISEMENT

ಸಭಾಧ್ಯಕ್ಷ ಸ್ಥಾನದಿಂದ ರಮೇಶ್‌ಕುಮಾರ್‌ ನಿರ್ಗಮನ ಇಂದು

​ಪ್ರಜಾವಾಣಿ ವಾರ್ತೆ
Published 28 ಜುಲೈ 2019, 20:11 IST
Last Updated 28 ಜುಲೈ 2019, 20:11 IST
   

ಬೆಂಗಳೂರು: ಧನವಿನಿಯೋಗ ಮಸೂದೆಗೆ ಒಪ್ಪಿಗೆ ಸಿಕ್ಕ ನಂತರ ತಮ್ಮ ಸ್ಥಾನದಿಂದ ಸ್ಪೀಕರ್‌ ಕೆ.ಆರ್.ರಮೇಶ್‌ಕುಮಾರ್‌ ನಿರ್ಗಮಿಸಲಿದ್ದಾರೆ.

‘ಧನವಿನಿಯೋಗ ಮಸೂದೆಗೆ ಒಪ್ಪಿಗೆ ಕೊಡಿಸುವ ಜವಾಬ್ದಾರಿ ನನ್ನ ಮೇಲಿದೆ. ಅದಕ್ಕೆ ಅನುಮೋದನೆ ದೊರೆತ ನಂತರ ಸ್ಥಾನದಿಂದ ಕೆಳಗೆ ಇಳಿಯುತ್ತೇನೆ’ ಎಂದು ರಮೇಶ್ ಕುಮಾರ್ ಭಾನುವಾರ ತಿಳಿಸಿದರು.

‘ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಜುಲೈ 29ರಂದೇ ವಿಶ್ವಾಸಮತ ಸಾಬೀತುಪಡಿಸಲು ಅಧಿವೇಶನ ಕರೆಯಬೇಕು ಎಂದು ಕೇಳಿಕೊಂಡಿದ್ದರು. ಅಧಿವೇಶನ ಕರೆಯಲು ಕಡಿಮೆ ಸಮಯ ಇದ್ದುದರಿಂದರಜೆ ದಿನವೂ ನನ್ನ ಕಚೇರಿಯ ಸಿಬ್ಬಂದಿ ಕೆಲಸ ನಿರ್ವಹಿಸಬೇಕಾಯಿತು. ಸೋಮವಾರ ಸದನದ ಕಲಾಪದಲ್ಲಿ ತೊಡಗಿಸಿಕೊಳ್ಳುವುದರಿಂದ ಸಮಯ ಸಿಗುವುದಿಲ್ಲ ಎಂಬ ಕಾರಣಕ್ಕಾಗಿ ಶಾಸಕರ ಅನರ್ಹತೆಗೆ ಸಂಬಂಧಿಸಿದ ಅರ್ಜಿಗಳನ್ನು ಇತ್ಯರ್ಥ ಮಾಡಿದ್ದೇನೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.