ADVERTISEMENT

ವಿಧಾನಮಂಡಲ ಅಧಿವೇಶನಕ್ಕೆ ಸಿದ್ಧತೆಯ ಪರಿಶೀಲನೆ ನಡೆಸಿದ ಸಭಾಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2020, 9:41 IST
Last Updated 24 ಆಗಸ್ಟ್ 2020, 9:41 IST
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಪರಿಶೀಲನೆ
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಪರಿಶೀಲನೆ   

ಬೆಂಗಳೂರು: ಸೆಪ್ಟಂಬರ್‌ 21 ರಿಂದ ನಡೆಯಲಿರುವ ವಿಧಾನಮಂಡಲ ಅಧಿವೇಶನ ನಡೆಸುವ ಸಂಬಂಧ ವಿಧಾನಸಭೆ ಸಭಾಂಗಣದಲ್ಲಿ ಪ್ರತಿಯೊಬ್ಬ ಸದಸ್ಯರಿಗೂ ಸುರಕ್ಷಿತ ವ್ಯವಸ್ಥೆ ಮಾಡುವ ಸಂಬಂಧ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪರಿಶೀಲನೆ ನಡೆಸಿದರು.

ಪ್ರತಿಯೊಬ್ಬ ಸದಸ್ಯನ ಆಸನದ ಸುತ್ತ ಚೌಕಕಾರದ ಗಾಜಿನ ತಡೆಯನ್ನು ಇರಿಸಿ, ಅದರಿಂದ ಸದಸ್ಯರಿಗೆ ಮಾತನಾಡಲು ಎದುರಾಗುವ ಅಡ್ಡಿಗಳ ಬಗ್ಗೆ ಅಧಿಕಾರಿಗಳ ಜತೆ ಕಾಗೇರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ಮಾತುಕತೆ ನಡೆಸಿದರು.

ಕೋವಿಡ್‌ ಕಾರಣ ಯಾವುದೇ ಸದಸ್ಯರಿಗೂ ಸೋಂಕು ತಗುಲಬಾರದು ಎಂಬ ಕಾರಣಕ್ಕೆ ವಿಶೇಷ ಮುತುರ್ವಜಿ ವಹಿಸಲಾಗಿದೆ. ಹಲವು ಶಾಸಕರು ಮತ್ತು ಸಚಿವರು ಕೋರೊನಾ ಸೋಂಕಿಗೆ ಒಳಗಾಗಿದ್ದ ಕಾರಣ ಎಚ್ಚರಿಕೆ ವಹಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.