ADVERTISEMENT

ಮುಖ್ಯಮಂತ್ರಿ ಚೇತರಿಕೆಗೆ ಪ್ರಾರ್ಥಿಸಿ ಮಾದಪ್ಪನಿಗೆ ವಿಶೇಷ ಪೂಜೆ.

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2020, 16:50 IST
Last Updated 3 ಆಗಸ್ಟ್ 2020, 16:50 IST
   

ಚಾಮರಾಜನಗರ: ಕೋವಿಡ್-19ನಿಂದ ಬಳಲುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಂಕಿನಿಂದ ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳುವಂತಾಗಲಿ ಎಂದು ಪ್ರಾರ್ಥಿಸಿ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿಗೆ ಸೋಮವಾರವಿಶೇಷ ಪೂಜೆ ಸಲ್ಲಿಸಲಾಯಿತು.

ಸಂಜೆ 7ರಿಂದ 8ರ ಅವಧಿಯಲ್ಲಿ ಏಕವಾರು ರುದ್ರಾಭಿಷೇಕ, ಮಹಾ ಸಂಕಲ್ಪ ಪೂಜೆ ಹಾಗೂ ಮಂಗಳಾರತಿಯನ್ನು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಧಾನ ಆಗಮಿಕ ಕರವೀರಸ್ವಾಮಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ADVERTISEMENT

ಮುಖ್ಯಮಂತ್ರಿ ಅವರು ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.