ಬೆಳಗಾವಿ: ಬೆಂಗಳೂರಿನಿಂದ ಬೆಳಗಾವಿ ಹಾಗೂ ಮೈಸೂರಿಗೆ ಮೇ 22ರಿಂದ ಪ್ರಾಯೋಗಿಕವಾಗಿ 2 ವಿಶೇಷ ರೈಲುಗಳ ಸಂಚಾರ ಪ್ರಾರಂಭಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.
ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನವಿ ಮೇರೆಗೆ ರೈಲುಗಳ ಸಂಚಾರ ಆರಂಭಿಸುತ್ತಿದ್ದೇವೆ. ಜನರು ಅಂತರ ಕಾಪಾಡಿಕೊಳ್ಳಬೇಕು. ಆರೋಗ್ಯ ತಪಾಸಣೆ ಮಾಡಿಸಿಕೊಂಡು ಸಂಚರಿಸಬೇಕು’ ಎಂದು ಕೋರಿದರು.
‘ಮೊದಲಿನಂತೆ ರೈಲು ನಿಲ್ದಾಣಕ್ಕೆ ಬಂದು ಜಮಾಯಿಸಬಾರದು. ಬಂದು ಆತಂಕಕ್ಕೆ ಒಳಗಾಗಬಾರದು. ಕಡ್ಡಾಯವಾಗಿ ಆನ್ಲೈನ್ನಲ್ಲಿಯೇ ಟಿಕೆಟ್ ಬುಕ್ ಮಾಡಬೇಕು. ಟಿಕೆಟ್ ಕನ್ಫರ್ಮ್ ಆದ ಮೇಲಷ್ಟೇ ನಿಲ್ದಾಣಕ್ಕೆ ಬರಬೇಕು’ ಎಂದು ತಿಳಿಸಿದರು.
ಬೆಂಗಳೂರಿನಿಂದಬೆಳಗಾವಿ ಹಾಗೂ ಮೈಸೂರಿಗೆ ವಿಶೇಷ ರೈಲು;ಇಲ್ಲಿದೆ ಎಕ್ಸ್ಪ್ರೆಸ್ ರೈಲು ನಿಲುಗಡೆ ಹಾಗೂ ಸಂಚರಿಸುವ ದಿನಗಳ ಮಾಹಿತಿ:–
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.