ADVERTISEMENT

ಪ್ರಧಾನಿ ಮೋದಿ ವಿರುದ್ಧ ಪೋಸ್ಟ್‌ ಹಾಕಿದ ವ್ಯಕ್ತಿ ಮನೆಗೆ ಶ್ರೀರಾಮ ಸೇನೆ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2020, 12:23 IST
Last Updated 6 ಮಾರ್ಚ್ 2020, 12:23 IST
   

ಹೊಸಪೇಟೆ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ ತಾಲ್ಲೂಕಿನ ವಡ್ಡರಹಳ್ಳಿ ನಿವಾಸಿ ನಬಿ ರಸೂಲ್‌ ಅವರ ಮನೆಗೆ ಶುಕ್ರವಾರ ಶ್ರೀರಾಮ ಸೇನೆಯ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ನಬಿ ಅವರನ್ನು ಮನೆಯಿಂದ ಹೊರಗೆ ಕರೆಸಿ ಗ್ರಾಮಸ್ಥರ ಸಮ್ಮುಖದಲ್ಲಿ ಕ್ಷಮೆ ಕೇಳಿಸಿದರು. ನಂತರ ‘ಭಾರತ್‌ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿಸಿದರು.

‘ನಬಿ ಅವರು ಮೋದಿ ಅವರ ಛಾಯಾಚಿತ್ರಗಳನ್ನು ಎಡಿಟ್‌ ಮಾಡಿ, ಅವರನ್ನು ಅಪಮಾನಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದರು. ವಿಷಯ ತಿಳಿದು ಅವರ ಮನೆಗೆ ಹೋಗಿ ಅಲ್ಲಿ ಪ್ರತಿಭಟನೆ ನಡೆಸಲಾಗಿದೆ. ಗ್ರಾಮಸ್ಥರ ಸಮ್ಮುಖದಲ್ಲಿ ಕ್ಷಮೆ ಕೇಳಿಸಲಾಗಿದೆ. ಇಂತಹ ಘಟನೆಗಳು ಪುನರಾವರ್ತನೆ ಆಗಬಾರದು ಎಂದು ಎಚ್ಚರಿಕೆ ಕೊಡಲಾಗಿದೆ’ ಎಂದು ಸೇನೆಯ ಕಾರ್ಯಾಧ್ಯಕ್ಷ ಅನೂಪ್‌ ಕುಮಾರ್‌ ತಿಳಿಸಿದರು.

ADVERTISEMENT

ಸೇನೆಯ ತಾಲ್ಲೂಕು ಅಧ್ಯಕ್ಷ ಜಗದೀಶ್‌ ಕಾಮಟಗಿ, ಮುಖಂಡರಾದ ಕಿಚಿಡಿ ಲಕ್ಷ್ಮಣ, ಬಂಗಾರು ಸೂರಿ, ಸಪ್ತಗಿರಿ, ರಾಜಾಹುಲಿ, ಹುಲುಗಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.