ADVERTISEMENT

ಅವನ್ಯಾರು ಹೇಳುವುದಕ್ಕೆ? ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ ಪ್ರಸಾದ್‌ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 17:05 IST
Last Updated 23 ಜುಲೈ 2021, 17:05 IST
ವಿ. ಶ್ರೀನಿವಾಸ ಪ್ರಸಾದ್‌
ವಿ. ಶ್ರೀನಿವಾಸ ಪ್ರಸಾದ್‌   

ಚಾಮರಾಜನಗರ: ಬಿಜೆಪಿ ದಲಿತರನ್ನು ಸಿಎಂ ಮಾಡಲಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀನಿವಾಸ ಪ್ರಸಾದ್‌, ‘ಅವನ್ಯಾರು ಹೇಳುವುದಕ್ಕೆ’ ಎಂದುಸಂಸದ ವಿ.ಶ್ರೀನಿವಾಸ ಪ್ರಸಾದ್‌ ಪ್ರಶ್ನಿಸಿದರು.

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ವಿರೋಧ ಪಕ್ಷದಲ್ಲಿರುವವರು ಈ ರೀತಿ ಹೇಳಿಕೆ ಕೊಡುವುದೇ? ಅವರು ಸಿ.ಎಂ ಆಗಿದ್ದಾಗ ಮುಂದಿನ ಬಾರಿಗೆ ದಲಿತರನ್ನು ಮುಖ್ಯ‌ಮಂತ್ರಿ ಮಾಡುತ್ತೇನೆ’ ಎನ್ನುತ್ತಿದ್ದರು. ಆಮೇಲೆ ಮಾತು ಬದಲಿಸಿ, ನಾನೇ ಮುಂದಿನ ಮುಖ್ಯಮಂತ್ರಿ ಎಂದು ಅಂಬಾರಿ ಮೇಲೆ ಕುಳಿತುಕೊಂಡು ಬಂದರು’ ಎಂದು ವ್ಯಂಗ್ಯವಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT