ಹೊಸಪೇಟೆ: ‘ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ವಿದ್ಯಾರ್ಥಿನಿ ಅಮೂಲ್ಯಾ ಲಿಯೋನಾ ಅವರ ಎನ್ಕೌಂಟರ್ ಮಾಡಿದವರಿಗೆ ಶ್ರೀರಾಮ ಸೇನೆಯ ವತಿಯಿಂದ ₹10 ಲಕ್ಷ ಬಹುಮಾನ ನೀಡಲಾಗುವುದು’ ಎಂದು ಸೇನೆಯ ಜಿಲ್ಲಾ ಅಧ್ಯಕ್ಷ ಸಂಜೀವ್ ಮರಡಿ ಇಲ್ಲಿ ಘೋಷಿಸಿದರು.
‘ದೇಶದ್ರೋಹದ ಹೇಳಿಕೆ ನೀಡಿರುವ ಅಮೂಲ್ಯಾ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ಕೊಡಬಾರದು. ಒಂದುವೇಳೆ ಬಿಡುಗಡೆ ಮಾಡಿದರೆ ನಾವೇ ಎನ್ಕೌಂಟರ್ ಮಾಡುತ್ತೇವೆ. ಎನ್ಕೌಂಟರ್ ಮಾಡಿದವರಿಗೆ ₹10 ಲಕ್ಷ ಬಹುಮಾನ ಕೊಡುತ್ತೇವೆ’ ಎಂದು ಆವೇಶ ಭರಿತರಾಗಿ ಹೇಳಿದರು. ಅವರು ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಎಡೆಮಾಡಿಕೊಟ್ಟಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.