ADVERTISEMENT

ಡಿಕೆಶಿ ಅಣ್ಣನವರೇ ಕ್ಷಮಿಸಿ: ಶ್ರೀರಾಮುಲು

ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದಿದ್ದ ಆರೋಗ್ಯ ಸಚಿವ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2019, 7:38 IST
Last Updated 3 ಸೆಪ್ಟೆಂಬರ್ 2019, 7:38 IST
   

ಚಿತ್ರದುರ್ಗ: ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಕುರಿತು ಆಡಿದ ಮಾತಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಕ್ಷಮೆ ಕೇಳಿದ್ದಾರೆ.

‘ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ಎಂಬ ಶ್ರೀರಾಮುಲು ಹೇಳಿಕೆಯನ್ನು ಉಲ್ಲೇಖಿಸಿ ಡಿ.ಕೆ.ಶಿವಕುಮಾರ್ ಕಣ್ಣೀರು ಹಾಕಿದ್ದರು.

‘ಡಿಕೆಶಿ ಅಣ್ಣನವರೇ ಕ್ಷಮಿಸಿ. ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕೈಮುಗಿದು ಕೇಳುತ್ತೇನೆ ದಯವಿಟ್ಟು ಕ್ಷಮಿಸಿ.. ಈ ವಿಚಾರದಲ್ಲಿ ನಾನು ಟೀಕೆ ಮಾಡಲ್ಲ’ಎಂದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಹೊನ್ನೂರು ಗ್ರಾಮದಲ್ಲಿ ಹೇಳಿಕೆ ನೀಡಿದ್ದಾರೆ.

ADVERTISEMENT

‘ರಾಜಕೀಯವಾಗಿ ಮಾತ್ರ ನಾನು ಮಾತನಾಡುತ್ತಿದ್ದೆ. ಯಾವುದೇ ಬೇರೆ ಉದ್ದೇಶದಿಂದ ಈ ಹೇಳಿಕೆ ನೀಡಿಲ್ಲ. ಕಾನೂನು ಏನು ಮಾಡಬೇಕೋ ಅದನ್ನು ಮಾಡುತ್ತೆ. ಇಂಥ ಸಂದರ್ಭದಲ್ಲಿ ಚುಚ್ಚಿ ಮಾತನಾಡಬಾರದು’ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.