ADVERTISEMENT

ಆರೋಗ್ಯ ಸಚಿವ ಶ್ರೀರಾಮುಲು ಹೆಸರಿನಲ್ಲಿ ನಕಲಿ ಟ್ವೀಟ್‌: ಪೊಲೀಸ್ ಆಯುಕ್ತರಿಗೆ ದೂರು

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2020, 11:19 IST
Last Updated 12 ಮಾರ್ಚ್ 2020, 11:19 IST
ಆರೋಗ್ಯ ಸಚಿವ ಶ್ರೀರಾಮುಲು
ಆರೋಗ್ಯ ಸಚಿವ ಶ್ರೀರಾಮುಲು    

ಬೆಂಗಳೂರು: ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ಹೆಸರಿನಲ್ಲಿಕೋವಿಡ್ ಬಗ್ಗೆ ನಕಲಿ ಟ್ವೀಟ್‌ ಮಾಡಲಾಗಿದೆ.

ಶ್ರೀರಾಮುಲು ಅವರೇ ಹೇಳಿದ ರೀತಿಯಲ್ಲಿ, 'ಗಂಜಲ ಕುಡಿಯುವುದರಿಂದ ಹಾಗೂ ಸಗಣಿಯನ್ನು ದೇಹಕ್ಕೆ ಸವರಿಕೊಳ್ಳುವುದರಿಂದ ಕೊರೊನಾ ವೈರಸ್ ತಡೆಗಟ್ಟಬಹುದು' ಎಂದು ಟ್ವೀಟ್‌ನಲ್ಲಿಹೇಳಲಾಗಿದೆ‌.

ಈ ನಕಲಿ ಟ್ವೀಟ್ ಬಗ್ಗೆ ಶ್ರೀರಾಮುಲು, ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರಿಗೆ ಗುರುವಾರ ದೂರು ನೀಡಿದ್ದಾರೆ.

ADVERTISEMENT

'ಯಾರೋ ಕಿಡಿಗೇಡಿಗಳು ನನ್ನ ಹೆಸರಿನಲ್ಲಿ ನಕಲಿ ಟ್ವೀಟ್‌ ಮಾಡಿದ್ದಾರೆ. ಜನರಿಗೆ ತಪ್ಪು ಸಂದೇಶ ರವಾನಿಸಿದ್ದಾರೆ' ಎಂದು ಶ್ರೀರಾಮುಲು ಹೇಳಿದ್ದಾರೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.