ADVERTISEMENT

ಅಪಘಾತಕ್ಕೀಡಾಗಿದ್ದ ವೃದ್ಧೆಗೆ ನೆರವಾದ ಆರೋಗ್ಯ ಸಚಿವ ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2019, 12:21 IST
Last Updated 28 ಸೆಪ್ಟೆಂಬರ್ 2019, 12:21 IST
   

ಉಡುಪಿ: ಕುಂದಾಪುರ ತಾಲ್ಲೂಕಿನ ಕೋಟ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವೃದ್ಧೆಯ ನೆರವಿಗೆ ಆರೋಗ್ಯ ಸಚಿವ ಶ್ರೀರಾಮುಲು ಧಾವಿಸಿದರು.

ಶನಿವಾರ ಜಿಲ್ಲಾ ಆಸ್ಪತ್ರೆಯಲ್ಲಿ ಸಭೆ ಮುಗಿಸಿ ಕುಂದಾಪುರಕ್ಕೆ ಹೊರಟಿದ್ದಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿರುವುದನ್ನು ಗಮನಿಸಿದ ಸಚಿವ ಶ್ರೀರಾಮುಲು, ಕಾರು ನಿಲ್ಲಿಸಿ ನೆರವಿಗೆ ಮುಂದಾದರು. ವೃದ್ಧೆಯನ್ನು ಶಾಸಕ ರಘುಪತಿ ಭಟ್ ಅವರ ಕಾರಿನಲ್ಲಿ ಕೂರಿಸಿ, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದುಅಗತ್ಯ ಚಿಕಿತ್ಸೆ ಕೊಡಿಸುವಂತೆ ಸಿಬ್ಬಂದಿಗೆ ಸೂಚಿಸಿದರು. ನಂತರು ಅವರುಕುಂದಾಪುರಕ್ಕೆ ತೆರಳಿದರು.

ರಾಮುಲು ನೆರವಿನ ವಿಡಿಯೊಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಹಲವರಿಂದ ಮೆಚ್ಚುಗೆ ವ್ಯಕ್ತವಾಗಿದೆ.‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.