ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಕೊಡಮಾಡುವ ‘ಶ್ರೀವಿಜಯ ಸಾಹಿತ್ಯ ಪ್ರಶಸ್ತಿ’ಗೆ ಪ್ರಸಕ್ತ ಸಾಲಿನಲ್ಲಿ ರಾಯಚೂರಿನ ಚಿದಾನಂದ ಸಾಲಿ ಹಾಗೂ ಕಾರವಾರದ ಶ್ರೀದೇವಿ ಕೆರೆಮನೆಅವರನ್ನು ಆಯ್ಕೆ ಮಾಡಲಾಗಿದೆ.
ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯ ಸಮಿತಿ ಶನಿವಾರ ಈ ಆಯ್ಕೆಯನ್ನು ಮಾಡಿದೆ.ಸಾಹಿತ್ಯ ಕ್ಷೇತ್ರಕ್ಕೆ ಮೌಲಿಕವಾದ ಕೊಡುಗೆ ನೀಡಿದ 45 ವರ್ಷದೊಳಗಿನವರಿಗೆ ನೀಡುವ ಈ ಪ್ರಶಸ್ತಿ ತಲಾ ₹60 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ ಎಂದು ಕಸಾಪ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.