ಬೆಂಗಳೂರು: ದೂರದರ್ಶನದ ಚಂದನ ವಾಹಿನಿಯಲ್ಲಿ ಶನಿವಾರ ಬೆಳಿಗ್ಗೆ 9.30ರಿಂದ 11ರವರೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ಎಸ್ಸೆಸ್ಸೆಲ್ಸಿಯ ಪುನರ್ ಮನನ ತರಗತಿಗಳು ಆರಂಭವಾಗಲಿವೆ.
‘ಏಪ್ರಿಲ್ 29ರಿಂದ ಆರಂಭವಾಗಿರುವ ಕನ್ನಡ ಮಾಧ್ಯಮದ ಪುನರ್ಮನನ ತರಗತಿ ರಾಜ್ಯದ ವಿದ್ಯಾರ್ಥಿ ಸಮೂಹಕ್ಕೆ ಸದ್ಬಳಕೆಯಾಗುತ್ತಿದೆ. ಮುಂದಿನ 30 ದಿನಗಳ ಅವಧಿಯಲ್ಲಿ ಮೊದಲ 16 ದಿನ ಗಣಿತ ಹಾಗೂ ವಿಜ್ಞಾನ, ನಂತರದ 10 ದಿನ ಸಮಾಜ ವಿಜ್ಞಾನ ಬೋಧಿಸಲಾಗುತ್ತದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.