ಬೆಂಗಳೂರು: ‘ಜನರ ದಿಕ್ಕು ತಪ್ಪಿಸುತ್ತಿರುವ ವಿರೋಧಪಕ್ಷಗಳಿಗೆ ತಕ್ಕ ಉತ್ತರ ಕೊಡುವ ಸಮರ್ಥರಿಗೆ ಪಕ್ಷದ ಪದಾಧಿಕಾರಿ ಸ್ಥಾನ ನೀಡಲಾಗಿದ್ದು, ವ್ಯಕ್ತಿಪೂಜೆಗಿಂತ ಪಕ್ಷ ಪೂಜೆ ಮುಖ್ಯ ಎಂಬುದನ್ನು ತೋರಿಸಿದಂತಾಗಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
‘ನರೇಂದ್ರ ಮೋದಿ ಹಾಗೂ ಯಡಿಯೂರಪ್ಪ ನೇತೃತ್ವದ ಸರ್ಕಾರಗಳ ಜನಪರ ಯೋಜನೆಗಳನ್ನು ಜನಪ್ರಿಯ ಗೊಳಿಸಲು ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಅನುಭವಿಗಳು, ಹಿರಿಯರು–ಕಿರಿಯರು ಇರುವ ಸಂಘಟನಾ ತಂಡವನ್ನು ರಚಿಸಿದ್ದಾರೆ. ಈ ತಂಡದೊಂದಿಗೆ ನಿಂತು ಪಕ್ಷ ಕಟ್ಟಲು ಸಚಿವರೆಲ್ಲರೂ ನೆರವಾಗುತ್ತೇವೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.