ADVERTISEMENT

ಮೋದಿ ಕಾರ್ಯಕ್ರಮದ ವೇದಿಕೆ ನಿರ್ಮಾಣ ಪೂಜೆ: ಪ್ರೀತಂ ಗೌಡ ಗೈರು

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2024, 16:23 IST
Last Updated 11 ಏಪ್ರಿಲ್ 2024, 16:23 IST
ಪ್ರೀತಂ ಗೌಡ
ಪ್ರೀತಂ ಗೌಡ   

ಮೈಸೂರು: ಏಪ್ರಿಲ್ 14ರಂದು ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿರುವ ಕಾರ್ಯಕ್ರಮದ ವೇದಿಕೆ ನಿರ್ಮಾಣದ ಭೂಮಿಪೂಜೆ ಗುರುವಾರ ನಡೆದ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಗೈರಾಗಿದ್ದರು.

ಪಕ್ಷದ ಕಚೇರಿಯಲ್ಲಿ ಅವರ ನೇತೃತ್ವದಲ್ಲೇ ಮಧ್ಯಾಹ್ನ 12 ಗಂಟೆಗೆ ನಿಗದಿಯಾಗಿದ್ದ ಸುದ್ದಿಗೋಷ್ಠಿಯನ್ನೂ ಕಡೆ ಕ್ಷಣದಲ್ಲಿ ರದ್ದುಗೊಳಿಸಲಾಯಿತು. ಸಂಜೆ ಅಲ್ಲಿಯೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಪ್ರೀತಂಗೌಡ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದರು. ಆದರೆ ಅಲ್ಲಿಗೂ ಪ್ರೀತಂಗೌಡ ಬರಲಿಲ್ಲ. ಬದಲಿಗೆ, ಅವರು ಎಚ್‌.ಡಿ.ಕೋಟೆ ತಾಲ್ಲೂಕಿನಲ್ಲಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT