ಮಡಿಕೇರಿ: ಅಪರೂಪದ ನಕ್ಷತ್ರ ಆಮೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಇಲ್ಲಿನ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಸೋಮವಾರ ಬಂಧಿಸಿದ್ದಾರೆ.
ತಾಲ್ಲೂಕಿನ ಕಾಟಗೇರಿ ನಿವಾಸಿ ತಿಮ್ಮಯ್ಯ ಬಂಧಿತ ಆರೋಪಿ. ನಕ್ಷತ್ರ ಆಮೆಯನ್ನು ಮನೆಯಲ್ಲಿ ಸಾಕಿದ್ದು, ವ್ಯಾಪಾರ ಮಾಡಲು ಪ್ರಯತ್ನಿಸುತ್ತಿದ್ದರು ಎನ್ನಲಾಗಿದೆ.
ಕಾರ್ಯಾಚರಣೆಯಲ್ಲಿ ಅರಣ್ಯ ಸಂಚಾರಿ ದಳದ ಸಹಾಯಕ ನಿರೀಕ್ಷಕ ಸುಭಾಷ್, ಸಿಬ್ಬಂದಿಗಳಾದ ಲಿಂಗರಾಜು,ನಾಣಯ್ಯ, ಮೋಹನ್, ರಾಜೇಶ್, ತ್ರಿಶೂಲ್, ಪೆಮ್ಮಯ್ಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.