ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್–19 ಸಾವಿನ ಪ್ರಮಾಣ ಏರಿಕೆಯಾಗುತ್ತಿದ್ದು ಈ ಬಗ್ಗೆ ಎಚ್ಚರ ವಹಿಸುವಂತೆ ಕಾಂಗ್ರೆಸ್ ಶಾಸಕ ಎಚ್.ಕೆ. ಪಾಟೀಲ ಅವರು ವೈದ್ಯಕೀಯ ಶಿಕ್ಷಣ ಸಚಿವರಿಗೆ ತಿಳಿಸಿದ್ದಾರೆ.
ಕೋವಿಡ್–19 ಅಂಕಿ–ಅಂಶಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಪಾಟೀಲ, ಕೋವಿಡ್–19ನಿಂದಾಗಿ ರಾಜ್ಯದಲ್ಲಿ ಮೃತಪಡುತ್ತಿರುವವರ ಪ್ರಮಾಣವು ದೇಶಕ್ಕಿಂತಲು ಹೆಚ್ಚಾಗಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣ ಪ್ರತಿ ಹತ್ತು ಲಕ್ಷಕ್ಕೆ 83 ಇದೆ. ದೇಶದಲ್ಲಿ ಈ ಪ್ರಮಾಣ 42 ಆಗಿದೆ. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಿ. ಬೆಂಗಳೂರಿನಲ್ಲಿ ಜನವರಿ–ಜುಲೈ ಅವಧಿಯಲ್ಲಿ ಸಾವಿನ ಪ್ರಮಾಣ ಶೇ.32 ರಷ್ಟು ಹೆಚ್ಚಾಗಿದೆ ಎಂಬುದು ನೆನಪಿರಲಿ ಎಂದು ಎಚ್ಚರಿಸಿದ್ದಾರೆ.
ಜೊತೆಗೆ, ಜನರಿಗೆ ಸುಳ್ಳು ಮಾಹಿತಿಗಳನ್ನು ನೀಡಿ ಸಮರ್ಥನೆ ಮಾಡಿಕೊಳ್ಳುವ ಬದಲಾಗಿ, ಆಡಳಿತ ಯಂತ್ರವನ್ನು ಚುರುಕುಗೊಳಿಸಿ ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.