ADVERTISEMENT

ರಾಜ್ಯದಲ್ಲಿ ನಿತ್ಯ 3 ಸಾವಿರ ಕೆ.ಜಿ ಕೊರೊನಾ ತ್ಯಾಜ್ಯ ಉತ್ಪತ್ತಿ: ಡಾ.ಕೆ. ಸುಧಾಕರ್

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 4:45 IST
Last Updated 16 ಜೂನ್ 2020, 4:45 IST
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್   

ಬೆಂಗಳೂರು: ‘ಕರ್ನಾಟಕದಲ್ಲಿ ನಿತ್ಯ 3,000 ಕೆ.ಜಿಯಷ್ಟು ಕೊರೊನಾ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಮಾಸ್ಕ್, ಪಿಪಿಇ ಕಿಟ್, ಕೈ ಗವುಸುಗಳು ಇದರ ಮೂಲ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

’ಈ ತ್ಯಾಜ್ಯದ ವಿಲೇವಾರಿ ವೈಜ್ಞಾನಿಕವಾಗಿ ಆಗಬೇಕು. ಆದರೆ, ಅದು ಕ್ಲಿಷ್ಟಕರ ಕೂಡಾ. ಈ ತ್ಯಾಜ್ಯ ಕಡಿಮೆ ಮಾಡಲು ಸಾರ್ವಜನಿಕರು ಮನೆಯಲ್ಲೇ ತಯಾರಿಸಿದ ಮರು ಬಳಕೆಯ ಮಾಸ್ಕ್ ಬಳಕೆ ರೂಡಿಸಿಕೊಳ್ಳಬೇಕು’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.