ADVERTISEMENT

ರಾಜ್ಯಮಟ್ಟದ ರೈತ ಸಮಾವೇಶ 26ಕ್ಕೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2021, 19:35 IST
Last Updated 4 ಡಿಸೆಂಬರ್ 2021, 19:35 IST

ಬೆಂಗಳೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘವು ವಿಶ್ವ ರೈತ ದಿನಾಚರಣೆ ಪ್ರಯುಕ್ತ ಇದೇ 26ಕ್ಕೆ ರಾಜ್ಯ ಮಟ್ಟದ ರೈತ ಸಮಾವೇಶವನ್ನುಮೈಸೂರಿನ ಕಲಾಮಂದಿರದಲ್ಲಿ ಹಮ್ಮಿಕೊಂಡಿದೆ.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡತೇಜಸ್ವಿ ವಿ. ಪಟೇಲ್‌, ‘ಸಮಾವೇಶವನ್ನು ಅಂದು ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸ ಲಿದ್ದಾರೆ.ಕೃಷಿ ಕ್ಷೇತ್ರದ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು’ ಎಂದರು.

‘ಹವಾಮಾನ ವೈಪರೀತ್ಯ, ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಕೊರತೆ, ಕಾರ್ಮಿಕರ ಅಲಭ್ಯತೆ ಸೇರಿದಂತೆ ಹಲವು ಸಮಸ್ಯೆಗಳಿಂದಾಗಿಕೃಷಿ ಲಾಭದಾಯಕವಾಗಿಲ್ಲ. ಈ ಸಮಸ್ಯೆಗಳಿಗೆ ಸರ್ಕಾರವು ಶಾಶ್ವತ ಪರಿಹಾರ ಒದಗಿಸ ಬೇಕು’ಎಂದು ಒತ್ತಾಯಿಸಿದರು.

ADVERTISEMENT

‘ರೈತರು ರಾಸಾಯನಿಕ ಗೊಬ್ಬರಕ್ಕೆ ಮಾರು ಹೋಗುವುದನ್ನು ತಪ್ಪಿಸಲು ಪಶುಸಂಗೋಪನೆ, ಸಮಗ್ರ ಕೃಷಿ ಪದ್ಧತಿಗೆ ಒತ್ತುಕೊಡಬೇಕು. ಕೃಷಿ ಯಂತ್ರೋ ಪಕರಣ ಬಾಡಿಗೆಗೆ ಒದಗಿಸುವ ಕೇಂದ್ರ ಗಳನ್ನು ಪ್ರಾರಂಭಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.