ಬೆಂಗಳೂರು: ಜನವರಿ ತಿಂಗಳಿನಲ್ಲಿ ರಾಜ್ಯದಲ್ಲಿ ಉಷ್ಣಾಂಶ ವಾಡಿಕೆಗಿಂತಲೂ 2 ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಕುಸಿಯುವುದರಿಂದ ಚಳಿ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.
ಉತ್ತರ ಭಾರತದಲ್ಲಿ ಬೀಸುತ್ತಿರುವ ಶೀತ ಮಾರುತದಿಂದ ದಕ್ಷಿಣದ ರಾಜ್ಯಗಳೂ ಚಳಿಯಿಂದ ತತ್ತರಿಸುವಂತಾಗಿದೆ. ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣ ಇರುವುದರಿಂದ ಚಳಿ ಕೊಂಚ ತಗ್ಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
* ಇವನ್ನೂ ಓದಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.