ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೋಮವಾರ ಬಹುಮತ ಸಾಬೀತುಪಡಿಸುವುದು ನಿಶ್ಚಿತ ಎಂದು ಕೇಂದ್ರ ಸಚಿವ ಪ್ರಹ್ಲಾದಜೋಶಿಹೇಳಿದರು.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಅವರು, ‘ಯಡಿಯೂರಪ್ಪನವರ ರೈತ ಪರ ಹೋರಾಟ ಪ್ರಶ್ನಾತೀತ. ಮೊದಲ ಸಂಪುಟ ಸಭೆಯಲ್ಲೇ ರೈತ ಪರ ನಿಲುವು ಕೈಗೊಳ್ಳುವ ಮೂಲಕ ಸರ್ಕಾರದ ಆದ್ಯತೆಯನ್ನು ಸ್ಪಷ್ಟಪಡಿಸಿದ್ದಾರೆ’ಎಂದರು.
ಸಚಿವ ಸಂಪುಟ ವಿಸ್ತರಣೆ ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಅಂತಿಮವಾಗಲಿದೆ ಎಂದು ತಿಳಿಸಿದರು.
ಯಾವುದೇ ಪಕ್ಷದ ಬೆಂಬಲವಿಲ್ಲದೆ ‘ವಿಶ್ವಾಸಮತ’
‘ಮುಖ್ಯಮಂತ್ರಿ ಯಡಿಯೂರಪ್ಪ ನೂರಕ್ಕೆ ನೂರರಷ್ಟು ಬಹುಮತ ಸಾಬೀತುಪಡಿಸಲಿದ್ದಾರೆ. ಬೇರೆ ಯಾವುದೇ ಪಕ್ಷದ ಬೆಂಬಲವಿಲ್ಲದೆ ನಾವು ವಿಶ್ವಾಸಮತದಲ್ಲಿ ಗೆಲುವು ಸಾಧಿಸಲಿದ್ದೇವೆ. ಬಿಜೆಪಿ ಸರ್ಕಾರಕ್ಕೆ ಜೆಡಿಎಸ್ ಬೆಂಬಲ ನೀಡುವ ವಿಚಾರದಲ್ಲಿ ಪ್ರಸ್ತಾವನೆ ಬಂದರೆ ಹೈಕಮಾಂಡ್ ಸೂಕ್ತ ತೀರ್ಮಾನ ಮಾಡಲಿದೆ’ ಎಂದು ವಿಧಾನಪರಿಷತ್ ಸದಸ್ಯ ರವಿಕುಮಾರ್ ಹೇಳಿದ್ದಾರೆ.
* ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.