ಬೆಂಗಳೂರು: ‘ಪಕ್ಷದ ಹುದ್ದೆ ವಿಚಾರದಲ್ಲಿ ನಮ್ಮ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿಲ್ಲ. ಅಂತಹ ಅಗತ್ಯವೂ ಇಲ್ಲ. ಒಬ್ಬ ನಾಯಕರ ಕೆಳಗೆ ಕೆಲಸ ಮಾಡಿದ ಮೇಲೆ ಅವರನ್ನು ಗೌರವಿಸುತ್ತೇನೆ’ ಎಂದು ಡಿ.ಕೆ.ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
‘ಜೆಡಿಎಸ್ ಮುಖಂಡರಾದ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಭಿನ್ನಾಭಿಪ್ರಾಯ ಇತ್ತು. ಆಗ ಹೋರಾಟ ಮಾಡಿದ್ದೇನೆ. ಈಗ ಅವರ ಜತೆ ಕೆಲಸ ಮಾಡಿದ ಮೇಲೆ ಅವರ ವಿರುದ್ಧ ಮಾತನಾಡಲು ತಲೆ ಕೆಟ್ಟಿದೆಯಾ’ ಎಂದು ಪ್ರಶ್ನಿಸಿದರು.
‘ರಾಜಕೀಯ ವ್ಯತ್ಯಾಸ ಬಂದರೂ ಪಕ್ಷದ ನಾಯಕರ ಬಗ್ಗೆ ಮಾತನಾಡುವುದಿಲ್ಲ.ವಿರೋಧ ಪಕ್ಷದಲ್ಲಿ ಯಾರಿಗೆ ಟಾಂಗ್ ಕೊಡಬೇಕೋ ಅವರಿಗೆ ಕೊಟ್ಟಿದ್ದೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.