ADVERTISEMENT

ಹೆಚ್ಚುವರಿ ನೀರಿನ ಬಳಕೆಗೆ ಅವಕಾಶ ಇಲ್ಲ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2021, 16:40 IST
Last Updated 22 ಫೆಬ್ರುವರಿ 2021, 16:40 IST
ಬಿ.ಎಸ್‌. ಯಡಿಯೂರಪ್ಪ
ಬಿ.ಎಸ್‌. ಯಡಿಯೂರಪ್ಪ   

ಬೆಂಗಳೂರು: ಕಾವೇರಿ ನದಿಯ ಹೆಚ್ಚುವರಿ ನೀರಿನ ಬಳಕೆಗೆ ತಮಿಳುನಾಡು ರೂಪಿಸಿರುವ ಯೋಜನೆಯ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ತಮಿಳುನಾಡು ಸೇರಿದಂತೆ ಯಾವುದೇ ರಾಜ್ಯದವರೂ ಹೆಚ್ಚುವರಿ ನೀರು ಪಡೆದು ಬಳಕೆ ಮಾಡಲು ಅವಕಾಶ ಕೊಡುವುದಿಲ್ಲ. ಹೇಳಿಕೆ ನೀಡುವುದರಿಂದ ಏನೂ ಪ್ರಯೋಜನ ಆಗುವುದಿಲ್ಲ. ಈ ಕುರಿತು ಜನರಿಗೆ ಯಾವುದೇ ಆತಂಕ ಬೇಡ’ ಎಂದರು.

ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ಸರ್ವಪಕ್ಷ ಸಭೆ ನಡೆಸುವ ಕುರಿತು ಇನ್ನೂ ಯೋಚನೆ ಮಾಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.