ADVERTISEMENT

ಅಕ್ಕಸಾಲಿಗನ ಅಂಗಡಿಯಲ್ಲಿ ಕಳವು; ಎರಡು ಮೂಟೆ ಮಣ್ಣು ಕದ್ದೊಯ್ದ ಕಳ್ಳರು

​ಪ್ರಜಾವಾಣಿ ವಾರ್ತೆ
Published 25 ಜುಲೈ 2020, 9:43 IST
Last Updated 25 ಜುಲೈ 2020, 9:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ನಗರದ ಅಂಚೆಪೇಟೆಯಲ್ಲಿರುವಅಕ್ಕಸಾಲಿಗರೊಬ್ಬರ ಅಂಗಡಿಯಲ್ಲಿ ಕಳ್ಳತನ ನಡೆದಿದ್ದು, ಅಂಗಡಿಯಲ್ಲಿದ್ದ ಎರಡು ಮೂಟೆ ಮಣ್ಣನ್ನು ಕಳ್ಳರು ಕದ್ದೊಯ್ದಿದ್ದಾರೆ.

ಅಂಗಡಿ ಬಾಗಿಲಿನ ಬೀಗ ಮುರಿದು ಕಬ್ಬಿಣದ ಪೆಟ್ಟಿಗೆಯಲ್ಲಿದ್ದ ಮಣ್ಣನ್ನು ಕಳ್ಳರು ಕದ್ದಿದ್ದಾರೆ. ಜುಲೈ 17ರ ರಾತ್ರಿ ಈ ಕಳ್ಳತನ ನಡೆದಿದೆ. ಮಾಸ್ಕ್ ಧರಿಸಿ ಕಳ್ಳರು ಕೃತ್ಯ ಎಸಗಿದ್ದಾರೆ.

ಅಂಗಡಿಯಲ್ಲಿದ್ದ 20 ಸಾವಿರ ನಗದು, ಹವಳದ ಸರ ಸೇರಿದಂತೆ ಗ್ರಾಹಕರು ನೀಡಿದ ಚಿನ್ನಾಭರಣ ಸಹ ಕಳವು ಮಾಡಲಾಗಿದೆ.

ADVERTISEMENT

ಘಟನೆ ಸಂಬಂಧ ಸೋಮಶೇಖರ್ ಎಂಬುವರು ಕೆ.ಆರ್. ಮಾರುಕಟ್ಟೆ ಠಾಣೆಗೆ ದೂರು ನೀಡಿದ್ದಾರೆ. ಮಣ್ಣಿನಲ್ಲಿ ಚಿನ್ನದ ಕಣಗಳು ಇದ್ದವು. ಚಿನ್ನವನ್ನು ತೆಗೆಯಲು ಮಣ್ಣು ತರಿಸಲಾಗಿತ್ತು ಎನ್ನಲಾಗುತ್ತಿದೆ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.