ಮೈಸೂರು: ಮೈಸೂರು, ಕೊಡಗು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಯ ಹಲವೆಡೆ ಮಂಗಳವಾರ ಬಿರುಸಿನ ಮಳೆಯಾಗಿದೆ.
ಹುಣಸೂರು ತಾಲ್ಲೂಕಿನಾದ್ಯಂತ ಎರಡು ಗಂಟೆಗೂ ಹೆಚ್ಚು ಹೊತ್ತು ಗುಡುಗಿನಿಂದ ಕೂಡಿದ ಭಾರಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ ವಿವಿಧೆಡೆ ಸಂಜೆ ಭಾರಿ ಮಳೆಯಾಗಿದೆ. ಮಂಡ್ಯದ ಬೀಡಿ ಕಾರ್ಮಿಕರ ಕಾಲೊನಿಯ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ, ನಿವಾಸಿಗಳು ಪರದಾಡಿದರು.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಒಂದು ತಾಸಿಗೂ ಹೆಚ್ಚು ಹೊತ್ತು ಉತ್ತಮ ಮಳೆ ಸುರಿಯಿತು. ಪಟ್ಟಣದ ಹಲವೆಡೆ ರಸ್ತೆಯಲ್ಲಿ ನೀರು ಹರಿದ ಕಾರಣ ವಾಹನ ಸವಾರರು ಪರದಾಡಿದರು. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.