ADVERTISEMENT

ಚಿತ್ರಗಳಲ್ಲಿ ನೋಡಿ: ಕೋವಿಡ್ ಮಾರ್ಗಸೂಚಿ: ದೇವಸ್ಥಾನ, ಚಿತ್ರಮಂದಿರ, ಅಂಗಡಿಗಳು ಬಂದ್

ಬೆಂಗಳೂರು: ಕೋವಿಡ್‌ ನಿಯಂತ್ರಣಕ್ಕಾಗಿ ರಾಜ್ಯದಾದ್ಯಂತ ರಾತ್ರಿ 9 ಗಂಟೆಯಿಂದ ಮುಂಜಾನೆ 6 ಗಂಟೆಯವರೆಗೆ ಕರ್ಫ್ಯೂ ಮತ್ತು ವಾರಾಂತ್ಯದಲ್ಲಿ ಅಂದರೆ ಶನಿವಾರ ಮತ್ತು ಭಾನುವಾರಗಳಂದು ಇಡೀ ದಿನ ಕರ್ಫ್ಯೂ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇ 4 ರವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ.‌ಇದೇವೇಳೆ, ಶಾಲಾ ಕಾಲೇಜುಗಳು, ನಿನಿಮಾ ಹಾಲ್‌ಗಳು, ಶಾಪಿಂಗ್‌ ಮಾಲ್‌, ಜಿಮ್ನಾಷಿಯಂ, ಯೋಗ ಕೇಂದ್ರಗಳು, ಸ್ಪಾ, ಕ್ರೀಡಾ ಕಾಂಪ್ಲೆಕ್ಸ್‌ಗಳು, ಸ್ಟೇಡಿಯಂ, ಈಜುಕೊಳ, ಮನರಂಜನಾ ಅಮ್ಯೂಸ್‌ಮೆಂಟ್‌ ಪಾರ್ಕ್‌, ಬಾರ್‌, ಆಡಿಟೋರಿಯಂಗಳು ಬಂದ್ ಮಾಡಲು ಆದೇಶಿಸಲಾಗಿದೆ.ಧಾರ್ಮಿಕ ಸ್ಥಳಗಳಲ್ಲಿ ಭಕ್ತರಿಗೆ ಅವಕಾಶ ಇರುವುದಿಲ್ಲ. ರೆಸ್ಟೊರೆಂಟ್‌ಗಳಿಂದ ಪಾರ್ಸೆಲ್‌ ಒಯ್ಯಲು ಮಾತ್ರ ಅವಕಾಶವಿದೆ. ಮದುವೆ ಸಮಾರಂಭಕ್ಕೆ 50ಕ್ಕೆ ಜನ, ಶವ ಸಂಸ್ಕಾರ, ಅಂತಿಮ ದರ್ಶನಕ್ಕೆ 20 ಜನರಿಗಷ್ಟೇ ಅವಕಾಶ ನೀಡಲಾಗಿದೆ. ಹಲವೆಡೆ, ಈಗಾಗಲೇ ಪೊಲೀಸರು ಹೊಸ ಮಾರ್ಗಸೂಚಿ ಜಾರಿಗೆ ಮುಂದಾಗಿದ್ದಾರೆ. ಕಾರ್ಯಾಚರಣೆಯ ಚಿತ್ರಗಳು ಇಲ್ಲಿವೆ.

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 8:48 IST
Last Updated 22 ಏಪ್ರಿಲ್ 2021, 8:48 IST
ಇಂದಿನಿಂದ ಚಿತ್ರಮಂದಿರಗಳು ಬಂದ್ ಮಾಡಲಾಗಿದೆ. (ಬೆಂಗಳೂರಿನ ಸಂತೋಷ್ ಚಿತ್ರಮಂದಿರ).
ಇಂದಿನಿಂದ ಚಿತ್ರಮಂದಿರಗಳು ಬಂದ್ ಮಾಡಲಾಗಿದೆ. (ಬೆಂಗಳೂರಿನ ಸಂತೋಷ್ ಚಿತ್ರಮಂದಿರ).   
ಚಿಕ್ಕಬಳ್ಳಾಪುರದಲ್ಲಿ ಅಗತ್ಯ ವಸ್ತುಗಳ ಅಂಗಡಿ ಬಿಟ್ಟು ಬೇರೆ ಅಂಗಡಿಗಳು ಬಂದ್
ಒಟಿಸಿ ರಸ್ತೆಯ ಹೋಟೆಲೊಂದರಲ್ಲಿ ತಿಂಡಿಯನ್ನು ಪಾರ್ಸಲ್ ಮಾಡಿಕೊಳ್ಳುತ್ತಿರುವ ದೃಶ್ಯ
ಒಟಿಸಿ ರಸ್ತೆಯ ಹೋಟೆಲೊಂದರಲ್ಲಿ ತಿಂಡಿಯನ್ನು ಪಾರ್ಸಲ್ ಮಾಡಿಕೊಳ್ಳುತ್ತಿರುವ ದೃಶ್ಯ
ರಾಯಚೂರಿನನಲ್ಲಿ ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ಓಪನ್
ವಿವಿ ಪುರಂನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಬಾಗಿಲು ಮುಚ್ಚಿರುವ ದೃಶ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.