ಸುಬ್ರಹ್ಮಣ್ಯ: ಪ್ರಸಿದ್ದ ಯಾತ್ರಾ ಸ್ಥಳವಾದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಸಂದರ್ಭದಲ್ಲಿ ಹಿಂದೂವೇತರ ವರ್ತಕರು ವ್ಯಾಪಾರ ವಹಿವಾಟು ನಡೆಸುವುದನ್ನು ನಿಷೇಧಿಸಿ ಅಳವಡಿಸಲಾದ ಬ್ಯಾನರ್ ಕಾಣಿಸಿಕೊಂಡಿದೆ.
ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ ಹಿಂದೂ ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ ಬ್ಯಾನರ್ ಅಳವಡಿಸಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರಾ ಸಂದರ್ಭದಲ್ಲಿ ಹಿಂದುವೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸುಬ್ರಹ್ಮಣ್ಯ ಠಾಣೆಗೆ ಹಿಂದೂ ಜಾಗರಣೆ ವೇದಿಕೆಯಸುಬ್ರಹ್ಮಣ್ಯ ಘಟಕದ ವತಿಯಿಂದ ದೂರು ನೀಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ಮುಜರಾಯಿ ಇಲಾಖೆಗೆ ಸೇರಿದೆ. ಇಲ್ಲಿ ಇದೇ 29ರಂದು ಚಂಪಾ ಷಷ್ಠಿ ಹಾಗೂ ಬ್ರಹ್ಮರಥೋತ್ಸವ ನಡೆಯಲಿದೆ. ಈ ದೇವಸ್ಥಾನದ ಜಾತ್ರೆಗಳಲ್ಲಿ ಹಿಂದೂವೇತರ ಧರ್ಮಗಳ ವರ್ತಕರೂ ವ್ಯಾಪಾರ ನಡೆಸುತ್ತಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.