ADVERTISEMENT

ಕಾಂಗ್ರೆಸ್ ‘ಬಯಲಾಟ’: ಸಚಿವ ಸುಧಾಕರ್ ವ್ಯಂಗ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಮೇ 2020, 9:55 IST
Last Updated 5 ಮೇ 2020, 9:55 IST
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ   

ಬೆಂಗಳೂರು: ಲಾಕ್‌ಡೌನ್‌ ಘೋಷಣೆಗೂ ಮೊದಲು ಬೆಂಗಳೂರು ಸೇರಿದಂತೆ ರಾಜ್ಯದ ದೊಡ್ಡ ನಗರಗಳಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಅವರ ಸ್ವಂತ ಊರುಗಳಿಗೆ ತಲುಪಿಸುವ ವಿಚಾರದಲ್ಲಿ ಭರ್ಜರಿ ರಾಜಕೀಯ ಮೇಲಾಟ ಆರಂಭವಾಗಿದೆ.

ಮೆಜೆಸ್ಟಿಕ್‌ಗೆ ಭೇಟಿ ನೀಡಿ ಕೆಎಸ್‌ಆರ್‌ಟಿಸಿಗೆ ₹ 1 ಕೋಟಿ ಚೆಕ್ ನೀಡಲು ಕಾಂಗ್ರೆಸ್ ಯತ್ನಿಸಿತ್ತು. ನಿನ್ನೆಯಷ್ಟೇ (ಮೇ 4) ಕಾರ್ಯಕರ್ತರಿಗೆ ವಿಡಿಯೊ ಸಂದೇಶ ಕಳಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಲಸೆ ಕಾರ್ಮಿಕರನ್ನು ಸ್ವಾಗತಿಸಿ, ಸ್ವಗ್ರಾಮಗಳಿಗೆ ತಲುಪಿಸಲು ನೆರವಾಗಿ ಎಂದು ಸೂಚಿಸಿದ್ದರು.

ಕಾಂಗ್ರೆಸ್‌ ನಾಯಕರ ಹೇಳಿಕೆ ಮತ್ತು ಪ್ರಯತ್ನಕ್ಕೆ ಇಂದು (ಮೇ 5) ತಿರುಗೇಟು ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ‘ಇದು ಕಾಂಗ್ರೆಸ್‌ನವರ ಭರ್ಜರಿ ಬಯಲಾಟ’ ಎಂದು ಟೀಕಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.