ADVERTISEMENT

ಬಿಎಸ್‌ವೈ ಮುಂದಿನ ಸಿಎಂ ಎಂಬುದು ಖುಷಿ ವಿಚಾರ: ಸಂಸದೆ ಸುಮಲತಾ 

​ಪ್ರಜಾವಾಣಿ ವಾರ್ತೆ
Published 24 ಜುಲೈ 2019, 9:10 IST
Last Updated 24 ಜುಲೈ 2019, 9:10 IST
   

ಬೆಂಗಳೂರು: ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಯಡಿಯೂರಪ್ಪ ಅವರಿಗೆ ಸಂಸದೆ ಸುಮಲತಾ ಅಂಬರೀಷ್‌ ಶುಭ ಕೋರಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ನನ್ನ ಗೆಲುವಿಗೆ ಬೆನ್ನಿಗೆ ನಿಂತ ನಾಯಕ ಇಂದು ಮುಖ್ಯಮಂತ್ರಿ ಕುರ್ಚಿ ಅಲಂಕರಿಸುತಿದ್ದಾರೆ ಎಂಬುದು ಖುಷಿ ವಿಚಾರ’ ಎಂದು ಬರೆದಿದ್ದಾರೆ.

ಬೆಂಗಳೂರಿನ ಡಾಲರ್ಸ್‌ ಕಾಲೋನಿಯ ನಿವಾಸದಲ್ಲಿ ಬುಧವಾರ ಬೆಳಿಗ್ಗೆ ಬಿ.ಎಸ್‌.ಯಡಿಯೂರಪ್ಪ ಅವರನ್ನು ಬಿಜೆಪಿ ಪಕ್ಷದ ಹಲವು ಮುಖಂಡರು ಸೇರಿದಂತೆ ಪಕ್ಷದ ಕಾರ್ಯಕರ್ತರು ಭೇಟಿ ಮಾಡಿ ಶುಭಕೋರಿದ್ದಾರೆ.

ADVERTISEMENT

‘ಪ್ರಜಾವಾಣಿ’ ಸುದ್ದಿ, ಬರಹಗಳಲ್ಲಿ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.