ADVERTISEMENT

ಸಂಸದೆ ಸುಮಲತಾ ಅಂಬರೀಷ್, ಅಭಿಷೇಕ್‌ ಹೆಸರಲ್ಲಿ ತುಲಾಭಾರ ಸಲ್ಲಿಸಿದ ಅಭಿಮಾನಿ

​ಪ್ರಜಾವಾಣಿ ವಾರ್ತೆ
Published 15 ಜೂನ್ 2019, 9:13 IST
Last Updated 15 ಜೂನ್ 2019, 9:13 IST
   

ಧಾರವಾಡ: ಇಲ್ಲಿನ ಪುರಾಣ ಪ್ರಸಿದ್ಧ ನುಗ್ಗಿಕೆರಿ ಆಂಜನೇಯದೇವಸ್ಥಾನದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮತ್ತುಅಭಿಷೇಕ್ ಅವರ ಹೆಸರಲ್ಲಿತುಲಾಭಾರ ಸೇವೆ ಶನಿವಾರ ನೆರವೇರಿತು.

ಲೋಕಸಭಾ ಚುನಾವಣೆ ಮತ್ತು ಅಮರ್ ಚಿತ್ರದ ಗೆಲುವಿಗಾಗಿ ಅವರ ಅಭಿಮಾನಿಗಳು ಹಮ್ಮಿಕೊಂಡಿದ್ದ ತುಲಾಭಾರ ಸೇವೆಯಲ್ಲಿ ಪಾಲ್ಗೊಂಡರು.

ಅಭಿಷೇಕ್ ಹೆಸರಲ್ಲಿ 100ಕೆಜಿ ಸಕ್ಕರೆ, 15 ಕೆಜಿ ತುಪ್ಪ ಮತ್ತು ಸುಮಲತಾ ಹೆಸರಲ್ಲಿ 75ಕೆಜಿ ಸಕ್ಕರೆ, 15 ಕೆಜಿ ತುಪ್ಪದ ತುಲಾಭಾರ ಸೇವೆ ಸಲ್ಲಿಸಲಾಯಿತು.

ADVERTISEMENT

ಈ ಸಂದರ್ಭದಲ್ಲಿ ನಟ ದೊಡ್ಡಣ್ಣ, ನಿರ್ಮಾಪಕ ರಾಕ್‌ಲೈನ್ವೆಂಕಟೇಶ್ ಮತ್ತು ನಿರ್ದೇಶಕಯೋಗರಾಜ್ ಭಟ್ ಮತ್ತು ನಾಗಶೇಖರ್ ಇದ್ದರು.

ಅಂಬರೀಷ್ ಅಭಿಮಾನಿ ಉದ್ಯಮಿ ನಾರಾಯಣ ಕಲಾಲ್ ಅವರು ತುಲಾಭಾರ ಆಯೋಜಿಸಿದ್ದರು. ದೇವಸ್ಥಾನದ ಪಾರುಪತ್ತೆದಾರ ಪಿ.ಆರ್.ದೇಸಾಯಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸುಮಲತಾ, ಏಳು ವರ್ಷಗಳ ಹಿಂದೆ ಹುಬ್ಬಳ್ಳಿ ಧಾರವಾಡಕ್ಕೆ ಬಂದಿದ್ದೆ. ಈಗ ಮತ್ತೆ ಬರುವ ಅವಕಾಶ ಸಿಕ್ಕಿದೆ ಎಂದರು.

ನಂತರ ಪದ್ಮ ಶ್ರೀನಿವಾಸ ಚಿತ್ರಮಂದಿರಕ್ಕೆ ಭೇಟಿ ನೀಡಿ ಅಮರ್ ಚಿತ್ರವನ್ನು ಸ್ವಲ್ಪ ಹೊತ್ತು ವೀಕ್ಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.